ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ, ಬಿಜೆಪಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವೆಡೆ ಯೋಚನೆ ಮಾಡುತ್ತದೆ, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ, ಯಾರ ಜೊತೆ ಬೇಕಾದರೂ ಅದು ಕೈ ಜೋಡಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈಗ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವುದಾದರೂ ಮಹತ್ವದ ನಿರ್ಣಯ ಹೊರಬೀಳಲಿದೆಯೇ? ಸಿಎಂ ಮಾತುಗಳಿಂದ ಹಾಗನ್ನಿಸಿದ್ದು ಸುಳ್ಳಲ್ಲ!