ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕ ಆಂತರಿಕ ಕಚ್ಚಾಟದಿಂದಾಗಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ನೆಲದಲ್ಲಿ ಕುಳಿತು ಪಾಠ ಕೇಳುವಂತಾಗಿದೆ.ರಾತ್ರೋರಾತ್ರಿ ವಿಭಾಗವನ್ನ ಬೇರೆಡೆ ಸ್ಥಳಾಂತರ ಮಾಡಿದ್ದಾರೆ. ಇದರಿಂದ ಹಳೆ ಕಟ್ಟಡದ ತರಗತಿಯ ಕೊಠಡಿಗಳಿಗೆ ಬೀಗ ಹಾಕಿರುವುದರಿಂದ ಕಾರಿಡಾರ್ನಲ್ಲೇ ವಿದ್ಯಾರ್ಥಿಗಳನ್ನು ಕೂರಿಸಿ ಪ್ರಾಧ್ಯಾಪಕರು ಪಾಠ ಮಾಡಿದ್ದಾರೆ.