‘ಪಡ್ಡೆಹುಲಿ’, ‘ರಾಣಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್ ಕೆ. ಅವರು ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರಕ್ಕೆ ‘ದಿಲ್ದಾರ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಮಾಸ್ ಎಂಟರ್ಟೇನ್ ಹಾಗೂ ಕಾಲೇಜು ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ಶ್ರೇಯಸ್ಗೆ ಜೊತೆಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ರವಿಚಂದ್ರನ್ ಅವರು ಬಂದು ತಂಡಕ್ಕೆ ಶುಭಕೋರಿದರು. ಆ ವಿಡಿಯೋ ಇಲ್ಲಿದೆ.