ನಟಿ ಐಶ್ವರ್ಯಾ ಅವರು ಇಷ್ಟು ದಿನಗಳ ಕಾಲ ಸ್ವರ್ಗದಲ್ಲಿ ಹಾಯಾಗಿ ಇದ್ದರು. ಆದರೆ ಈಗ ಅವರು ನರಕದ ಪಾಲಾಗಿದ್ದಾರೆ. ಈ ಶಿಕ್ಷೆಯಿಂದ ಅವರನ್ನು ತಪ್ಪಿಸಲು ಕ್ಯಾಪ್ಟನ್ ಹಂಸಾ ಪ್ರಯತ್ನ ಮಾಡಿದರೂ ಕೂಡ ಅದಕ್ಕೆ ಬಿಗ್ ಬಾಸ್ ಅನುಮತಿ ನೀಡಲಿಲ್ಲ. ಕಡೆಗೂ ಐಶ್ವರ್ಯಾ ಅವರು ನರಕಕ್ಕೆ ಬರುವುದು ಅನಿವಾರ್ಯ ಆಯಿತು. ಇದರಿಂದಾಗಿ ಜಗದೀಶ್ಗೆ ಸಖತ್ ಖುಷಿ ಆಗಿದೆ.