ಅಣಕು ಆನೆ ಮೇಲೆ ಬಂದು ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಪ್ರತಿಯೊಂದು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಆನೇಕಲ್​ನಲ್ಲಿ ಅಭ್ಯರ್ಥಿ ಒಬ್ಬರು ವಿಭಿನ್ನವಾಗಿ ನಾಮಪತ್ರ ಸಲ್ಲಿಸಿ ಎಲ್ಲರ ಗಮನಸೆಳೆದಿದ್ದಾರೆ. ಆನೇಕಲ್​ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ ಅವರು ಪಕ್ಷದ ಚುನಾವಣಾ ಚಿಹ್ನೆಯಾದ ಅಣಕು ಆನೆ ಮೇಲೆ ಸವಾರಿ ಮಾಡಿ ನಾಮಪತ್ರ ಸಲ್ಲಿಸಿದ್ದಾರೆ.