ಸೆಪ್ಟೆಂಬರ್​ನಲ್ಲಿ ನಿವೃತ್ತಿ ಪ್ಲಾನ್ ಘೋಷಿಸಲು ಪ್ರಧಾನಿ ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ; ಸಂಜಯ್ ರಾವತ್

ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯನ್ನು ಆರ್‌ಎಸ್‌ಎಸ್ ನಿರ್ಧರಿಸುತ್ತದೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿಕೊಂಡಿದ್ದಾರೆ. ನಿನ್ನೆ ನಾಗ್ಪುರದ ಆರ್​ಎಸ್​ಎಸ್​ ಕಚೇರಿಗೆ ಭೇಟಿ ನೀಡಿದ ಪಿಎಂ ನರೇಂದ್ರ ಮೋದಿಯವರ ಬಗ್ಗೆ ಸಂಜಯ್ ರಾವತ್ ಈ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರಧಾನಿ ಮೋದಿ ನಿವೃತ್ತಿ ಪಡೆಯಲಿದ್ದಾರೆ. ಈ ಬಗ್ಗೆ ಚರ್ಚಿಸಲು ಅವರು ಆರ್​ಎಸ್​ಎಸ್​ ಕಚೇರಿಗೆ ತೆರಳಿದ್ದರು ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.