ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ಸಿಗುವುದಕ್ಕೂ ಮುಂಚೆ ಇಂದು ರೇವಣ್ಣ ಭೇಟಿಗೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು ಆಗಮಿಸಿದ್ದರು. ನಾಲ್ವರು ಸ್ನೇಹಿತರ ಜತೆ ಭೇಟಿ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರಪರಾಧಿಗೆ ಶಿಕ್ಷೆ ಆಗಿದೆ ಎಂದು ಹೆಚ್.ಡಿ.ರೇವಣ್ಣ ಅವರು ಬಹಳ ಬೇಸರಗೊಂಡಿದ್ದಾರೆ ಎಂದು ಹೇಳಿದ್ದಾರೆ.