ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ

ಪುನೀತ್ ಮತ್ತು ಶ್ರೀಕಾಂತ್ ರೌಡಿಶೀಟರ್​ಗಳಾ? ಅವರ ಅಪರಾಧಿಕ ಹಿನ್ನೆಲೆ ಏನು ಅನ್ನೋದು ತನಿಖೆಯ ನಂತರವೇ ಗೊತ್ತಾಗಬೇಕು, ಈಗಷ್ಟೇ ಪ್ರಕರಣ ದಾಖಲಾಗಿದೆ ಎಂದು ನಿನ್ನೆ ರಾತ್ರಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೊಲೀಸ್ ಇನ್ಸ್​ಪೆಕ್ಟರ್ ಹೇಳುತ್ತಾರೆ. ರಸ್ತೆಗಳಲ್ಲಿ ಸಿಸಿಟಿವಿ ಕೆಮೆರಾಗಳಿರುತ್ತವೆ ತಮ್ಮ ಕೃತ್ಯ ಕೆಮೆರಾದಲ್ಲಿ ಸೆರೆಯಾಗುತ್ತದೆ ಎಂದು ಗೊತ್ತಿದ್ದರೂ ರೌಡಿಗಳು ಕೊಲೆ ನಡೆಸೋದು ಕಾನೂನಿನ (ಪೊಲೀಸರು) ಬಗ್ಗೆ ಭಯ ಇಲ್ಲದಿರೋದು ಸ್ಪಷ್ಟವಾಗುತ್ತದೆ.