ಆ ರಾಜ್ಯದ ರೈತರು ವರ್ಷಕ್ಕೆ ಮೂರು ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಆದರೆ ನಮ್ಮ ರೈತರಿಗೆ ಒಂದು ಬೆಳೆಗೂ ನೀರು ದಕ್ಕುತ್ತಿಲ್ಲ ಎಂದು ಸೂರ್ಯ ಹೇಳಿದರು. ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟ ದಿನೇದಿನೆ ಕುಸಿಯುತ್ತಿದೆ, ಇದು ಹೀಗೆಯೇ ಮುಂದುವರಿದರೆ, ಮುಂದಿನ 3-4 ತಿಂಗಳು ನಂತರ ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಬೆಂಗಳೂರು ನಗರಕ್ಕೆ ಕುಡಿಯಲು ನೀರಿಲ್ಲದಂತಾಗುವ ಸಾಧ್ಯತೆ ಇದೆ ಎಂದು ಸಂಸದ ತೇಜಸ್ವೀ ಸೂರ್ಯ ಹೇಳಿದರು.