ಇಂದು ಜಿಲ್ಲೆಯ ತುರುವೇಕೆರೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಸಮನ್ವಯ ಸಭೆಯಲ್ಲಿ ಎರಡು ಪಕ್ಷಗಳ ಮುಖಂಡರ ಅಸಮಾಧಾನ ಭುಗಿಲೆದ್ದಿತು. ತುರುವೇಕೆರೆ ಕ್ಷೇತ್ರದ ಶಾಸಕ ಎಂಟಿ ಕೃಷ್ಣಪ್ಪ ಮತ್ತು ಕೊಂಡಜ್ಜಿ ವಿಶ್ವನಾಥ್ ಬೆಂಬಲಿಗರ ನಡುವೆ ಮಾತಿನ ಚಕಮಕಿಯನ್ನು ದೃಶ್ಯಗಳಲ್ಲಿ ನೋಡಬಹುದು. ಕೃಷ್ಣಪ್ಪ ಆಡಿದ ಮಾತಿಗೆ ಜೆಡಿಎಸ್ ಕಾರ್ಯಕರ್ತರು ಅಸಮಾಧಾನಗೊಂಡು ಕೂಗಾಡಲಾರಂಭಿಸಿದರು.