ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಪತ್ನಿ ಸಮೇತರಾಗಿ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯಲ್ಲಿರುವ ಐತಿಹಾಸಿಕ ಮತ್ತು ಖ್ಯಾತ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ತೆರಳಿ ಉಗ್ರ ಸ್ವರೂಪಿಣಿಯ ದರ್ಶನ ಪಡೆದರು. ಕೇರಳ ಹಾಗೂ ತಮಿಳುನಾಡಿನಲ್ಲಿ ಪ್ರತ್ಯಂಗಿರಾ ದೇವಿಯ ಆರಾಧಕರು ಹೆಚ್ಚಾಗಿದ್ದು, ಉನ್ನತ ಹುದ್ದೆಗಳಿಗೆ ಎದುರಾಗುವ ಅಡೆತಡೆಗಳನ್ನು ದೇವಿ ನಿವಾರಣೆ ಮಾಡುತ್ತಾಳೆ ಎಂಬ ನಂಬಿಕೆ ಇದೆ.