ರಾಜ್ಯದ ಭೀಕರ ಬರದ ಸ್ಥಿತಿಯಲ್ಲಿದೆ, ಸರ್ಕಾರವೇನೂ ಕೈ ಕಟ್ಟಿ ಕೂತಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಾತಾಡಿದ್ದು ಎಲ್ಲ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. ತಮ್ಮ ತಮ್ಮ ಜಿಲ್ಲೆಗಳ ಬರ ಸಮೀಕ್ಷೆಯನ್ನು ನಡೆಸುವಂತೆ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ತಿಳಿಸಲಾಗಿದೆ ಅಂತಲೂ ಸಿದ್ದರಾಮಯ್ಯ ಹೇಳಿದರು.