ಕಳೆದ ಒಂದು ವಾರದಿಂದ ನಕ್ಸಲರ ಸದ್ದು ರಾಜ್ಯದಲ್ಲಿ ಕೇಳಿಬರುತ್ತಿದೆ. ಅಸಲಿಗೆ ನಕ್ಸಲ್ ಚಟುವಟಿಕೆಗಳು ನಿಂತು ಹೋಗಿವೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನಗಳು ಸಫಲವಾಗಿವೆ ಎಂದು ಭಾವಿಸಲಾಗಿತ್ತು. ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ್ ನಕ್ಸಲ್ ಚಟುವಟಿಕೆಗಳನ್ನು ಕೊನೆಗೊಳಿಸಲಾಗುವುದು ಎಂದು ಹೇಳಿದ್ದಾರೆ.