ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಭಕ್ತರ ದೊಡ್ಡ ದಂಡು ಆಗಮಿಸಿದೆ. ಕೆಎಸ್ಆರ್ಟಿಸಿ ಬಸ್ಗಳು ಹೌಸ್ಫುಲ್ ಆಗಿದ್ದು, 100 ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಲಾಗಿದೆ. ಬೆಂಗಳೂರಿನಿಂದಲೂ ನೇರ ಬಸ್ಗಳನ್ನು ಏರ್ಪಡಿಸಲಾಗಿದೆ. ಭಕ್ತರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಾಡು ಮಾಡಲಾಗಿದೆ. ಈಶಾ ಫೌಂಡೇಶನ್ನಲ್ಲಿ ಆದಿಯೋಗಿ ದರ್ಶನ ಪಡೆಯಲು ಭಕ್ತರು ಉತ್ಸುಕರಾಗಿದ್ದಾರೆ.