ಮಂಡ್ಯದಲ್ಲಿ ಹೆಚ್ ಡಿ ಕುಮಾರಸ್ವಾಮಿ

ರಾಜ್ಯದ ಕೆಲ ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸುವಂತೆ ಮನವಿ ಮಾಡಲು ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ್ದೇನೆ, ಶ್ರೀರಂಗಪಟ್ಟಣದಿಂದ ಅರಸೀಕೆರೆ ನಡುವಿನ ರಸ್ತೆಯನ್ನು ಅಪ್​ಗ್ರೇಡ್ ಮಾಡಬೇಕಿದೆ, ಮಂಡ್ಯದ ರಿಂಗ್ ರಸ್ತೆ ಕಾಮಗಾರಿಗೆ ಚಾಲನೆ ನೀಡಬೇಕಿದೆ ಮತ್ತು 2016ರಲ್ಲಿ ನಿಂತುಹೋಗಿರುವ ರಸ್ತೆ ಕಾಮಗಾರಿಗಳನ್ನು ಪುನಃ ಆರಂಭಿಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.