ರಾಷ್ಟ್ರ ಪ್ರಶಸ್ತಿ ಸ್ವೀಕರಿಸಲು ದೆಹಲಿಗೆ ಹೋಗಿ ‘ತಗ್ಗೆದೆಲೆ..’ ಡೈಲಾಗ್​ ಹೊಡೆದ ಅಲ್ಲು ಅರ್ಜುನ್​; ವಿಡಿಯೋ ನೋಡಿ

ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ’ ಸಿನಿಮಾದಲ್ಲಿನ ನಟನೆಗೆ ‘ರಾಷ್ಟ್ರ ಪ್ರಶಸ್ತಿ’ ಪಡೆದಿದ್ದಾರೆ. ಪ್ರಶಸ್ತಿ ಸ್ವೀಕರಿಸಲು ಅವರು ಇಂದು (ಅಕ್ಟೋಬರ್​ 17) ದೆಹಲಿಗೆ ತೆರಳಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಆರಂಭ ಆಗುವುದಕ್ಕೂ ಮುನ್ನ ಅವರು ಡಿಡಿ ನ್ಯಾಷನಲ್​ ವಾಹಿನಿ ಜೊತೆ ಮಾತನಾಡಿದ್ದಾರೆ. ತಮ್ಮ ಕಮರ್ಷಿಯಲ್​ ಸಿನಿಮಾದಲ್ಲಿನ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಬಂದಿರುವುದು ದುಪ್ಪಟ್ಟು ಖುಷಿ ನೀಡಿದೆ ಎಂದು ಅರ್ಜುನ್​ ಅವರು ಹೇಳಿದ್ದಾರೆ. ಇದೇ ವೇಳೆ ಅವರು ‘ತಗ್ಗೆದೆಲೆ..’ ಎಂದು ಡೈಲಾಗ್​ ಹೊಡೆದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ನ್ಯಾಷನಲ್​ ಅವಾರ್ಡ್​ ಪಡೆಯುತ್ತಿರುವ ಅಲ್ಲು ಅರ್ಜುನ್​ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.