ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಧನರಾಜ್ ಅವರು ಫಿನಾಲೆ ಟಿಕೆಟ್​ ಪಡೆಯಬೇಕು ಎಂದು ಕಷ್ಟಪಟ್ಟು ಆಟ ಆಡಿದ್ದರು. ಗೌತಮಿ ಜಾದವ್ ಮತ್ತು ಉಗ್ರಂ ಮಂಜು ಜೊತೆ ಅವರು ಕೈ ಜೋಡಿಸಿದ್ದರು. ಆದರೆ ಕೊನೇ ಹಂತದಲ್ಲಿ ಗೌತಮಿ ಮತ್ತು ಮಂಜು ಸೇರಿ ಧನರಾಜ್​ಗೆ ಫಿನಾಲೆ ಟಿಕೆಟ್​ ಸಿಗದಂತೆ ಮಾಡಿದ್ದಾರೆ. ಈ ಸ್ಥಿತಿ ಬಂದಿದ್ದಕ್ಕೆ ಇನ್ನುಳಿದ ಸದಸ್ಯರು ಲೇವಡಿ ಮಾಡಿದ್ದಾರೆ.