ಮೈಸೂರಿನ ವಿವಿಧೆಡೆಗಳಲ್ಲಿ ಬುಧವಾರ ಮುಂಜಾನೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೋಟೆಲ್, ಕಲ್ಯಾಣ ಮಂಟಪ, ಎಂ ಪ್ರೋ ಪ್ಯಾಲೇಸ್ ಹಾಗೂ ಸರ್ಕಾರದ ಗುತ್ತಿಗೆ ವಹಿಸಿಕೊಳ್ಳುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ನಿವಾಸದ ಮೇಲೂ ದಾಳಿ ನಡೆದಿದೆ. ಮೂರು ಕಾರುಗಳಲ್ಲಿ ಬಂದ ಹತ್ತು ಮಂದಿ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.