ಕೆಲ ವಾರಗಳ ಹಿಂದೆ, ರಾಜ್ಯದಲ್ಲಿ ಕಾವೇರಿ ನದಿ ನೀರಿಗಾಗಿ ಉಗ್ರಸ್ವರೂಪದ ಹೋರಾಟ ನಡೆಯುತ್ತಿದ್ದಾಗ ನಾಡಿನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತು ಮಾತುಕತೆ ನಡೆಸಲು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ನಿಖಿಲ್ ನನ್ನೂ ಸಂಗಡ ಕರೆದೊಯ್ದಿದ್ದರು.