ಮುಖ್ಯಮಂತ್ರಿಯವರ ಕಾರಿನ ತಪಾಸಣೆ

ಇಂದು ರಾತ್ರಿ ಮೈಸೂರಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು ಶನಿವಾರವೂ ಬಿಡುವಿಲ್ಲದೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವ ನಿರೀಕ್ಷೆ ಇರುವುದರಿಂದ ಮುಖ್ಯಮಂತ್ರಿಯವರು ಈ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಆಶ್ಚರ್ಯವಿಲ್ಲ.