ಅದು ಸರಿ, ಕೋಲಾರದಲ್ಲಿ ಕಾಂಗ್ರೆಸ್ ರಾಜ್ಯ ನಾಯಕರೆಲ್ಲ ಪ್ರಚಾರ ಮಾಡುತ್ತಿದ್ದರೆ ಸ್ಥಳೀಯರೇ ಅಗಿರುವ ಕೆಹೆಚ್ ಮುನಿಯಪ್ಪ ನಾಪತ್ತೆಯಾಗಿದ್ದಾರೆ ಅಂತ ಕೇಳಿದಾಗ ಉತ್ತರಿಸಲು ತಡವರಿಸಿದ ಸಿದ್ದರಾಮಯ್ಯ, ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇರಬಹುದು ಎಂದು ಹಾರಿಕೆ ಉತ್ತರ ನೀಡಿದರು.