ಗೃಹ ಸಚಿವ ಜಿ ಪರಮೇಶ್ವರ್

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಯಲ್ಲಿ ತನ್ನದೇನೂ ಪಾತ್ರವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳುತ್ತಾರೆ. ತಮ್ಮ ಅಭಿಪ್ರಾಯ ಪರಿಗಣಿಸುವ ಅವಶ್ಯಕತೆಯಿಲ್ಲ ಎಂದ ಅವರು; ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಮತ್ತು ಕರ್ನಾಟಕದ ಎಐಸಿಸಿ ಉಸ್ತುವಾರಿ ನಡುವೆ ಕಳೆದ ವಾರ ಮಾತುಕತೆ ನಡೆದಿದೆ, ಅವರೇ ಪಟ್ಟಿಯನ್ನು ಅಂತಿಮಗೊಳಿಸುತ್ತಾರೆ ಅಂತ ಹೇಳಿದರು.