ನವದೆಹಲಿಯಲ್ಲಿ ಇಂದು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಜಗದೀಪ್ ಧಂಖರ್, ಆಗಿನ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ದೊಡ್ಡ ಪ್ರಮಾಣದ ಸುಟ್ಟ ನಗದು ಪತ್ತೆಯಾದ ಬಗ್ಗೆ ಎಫ್ಐಆರ್ ದಾಖಲಾಗದೆ ಇರುವುದನ್ನು ಪ್ರಶ್ನಿಸಿದ್ದಾರೆ. "ನಮ್ಮ ದೇಶದಲ್ಲಿ ಕಾನೂನಿನ ನಿಯಮ ಮತ್ತು ಕ್ರಿಮಿನಲ್ ನ್ಯಾಯ ವ್ಯವಸ್ಥೆ ಇದೆ. ಅದಕ್ಕೆ ಎಫ್ಐಆರ್ ಅಗತ್ಯವಿದೆ. ಕಾನೂನಿನ ನಿಯಮವು ಸಮಾಜದ ಅಡಿಪಾಯವಾಗಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಕಾಯುತ್ತಿದ್ದಾರೆ. ಜನರಿಗೆ ಸಂಪೂರ್ಣ ಸತ್ಯ ಹೊರಬರುವುದನ್ನು ಹೊರತುಪಡಿಸಿ ಬೇರೇನೂ ಬೇಕಾಗಿಲ್ಲ ಎಂದ ಜಗದೀಪ್ ಧಂಖರ್ ಆಂತರಿಕ ತನಿಖೆ ನಡೆಸುವ ಮೂವರು ನ್ಯಾಯಾಧೀಶರ ಸಮಿತಿಯ ಕಾನೂನು ಸ್ಥಿತಿಯನ್ನು ಪ್ರಶ್ನಿಸಿದ್ದಾರೆ. ಇದು ಯಾವುದೇ ಸಾಂವಿಧಾನಿಕ ನಿಬಂಧನೆ ಅಥವಾ ಕಾನೂನಿನ ಅಡಿಯಲ್ಲಿ ಸ್ಥಾಪಿಸಲ್ಪಟ್ಟಿಲ್ಲ ಎಂದು ಅವರು ಹೇಳಿದ್ದಾರೆ.