ಬಿಜೆಪಿ ಜೊತೆ ಮೈತ್ರಿ ಬೆಳೆಸುವ ನಿರ್ಧಾರವನ್ನು ಧಾವಂತದಲ್ಲಿ ತೆಗೆದುಕೊಂಡಿಲ್ಲ ಎಂದ ದೇವೇಗೌಡರು, ಅದನ್ನು ಜೆಡಿಎಸ್ ಪಕ್ಷದ 19 ಶಾಸಕರು ಮತ್ತು 8 ವಿಧಾನ ಪರಿಷತ್ ಸದಸ್ಯರೊಂದಿಗೆ ಚರ್ಚಿಸಲಾಯಿತು ಎಂದರು. ಅದು ಸರಿ, ಎರಡು ದಿನಗಳ ಹಿಂದೆ ನಡೆಸಿದ ಪತ್ರಿಕಾ ಗೋಷ್ಟಿಯಲ್ಲಿ ಮಾತಾಡಿದ್ದ ದೇವೇಗೌಡರು ಬಿಜೆಪಿ-ಜೆಡಿಎಸ್ ಮೈತ್ರಿ ವಿಷಯ ತನಗೆ ಸಂಬಂಧಿಸಿದ್ದಲ್ಲ ಅದನ್ನು ಕುಮಾರಸ್ವಾಮಿ ನೋಡಿಕೊಳ್ಳುತ್ತಿದ್ದಾರೆ ಅಂತ ಹೇಳಿದ್ದರು.