ರಾಜ್ಯದ ಹಲವಾರು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿರುವ ತನಗೆ ಯಾವುದೇ ಖಾತೆ ನೀಡಿದರೂ ಅದನ್ನು ನಿಷ್ಠೆಯಿಂದ ನಿಭಾಯಿಸುವುದಾಗಿ ಹೇಳಿದರು. ತನ್ನೊಂದಿಗೆ ಮಾತಾಡಿದ ಪ್ರಧಾನ ಮಂತ್ರಿಯವರು, ನೀವೊಂದು ಸಾಧನೆ ಮಾಡಿದ್ದೀರಿ ಮತ್ತು ಅಧಿಕಾರಿಗಳ ಜೊತೆ ಸೇರಿ ನಿಷ್ಠೆಯಿಂದ ಕೆಲಸ ಮಾಡಿ, ಯಾವುದೇ ರೀತಿಯ ಗೊಂದಲ ಇಟ್ಟುಕೊಳ್ಳಬೇಡಿ ಮತ್ತು ಸಮಸ್ಯೆ ಎದುರಾದಾಗ ಸೀನಿಯರ್ ಗಳ ಸಲಹೆ ಪಡೆಯಿರಿ ಮತ್ತು ತನ್ನನ್ನೂ ಸಂಪರ್ಕಿಸಿ ಎಂದು ಹೇಳಿದರು ಎಂದು ಸೋಮಣ್ಣ ತಿಳಿಸಿದರು.