ಕರ್ನಾಟಕದಲ್ಲಿ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಗಳು ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು, ರಾಜಕೀಯ ಕೆಸೆರೆಚಾಟಕ್ಕೆ ಕಾರಣವಾಗಿವೆ. ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕೆಂದು ಬಿಜೆಪಿ ಸಂಸದರು ಸಂಸತ್ ಭವನದ ಮುಂದೆ ಪ್ರತಿಭಟನೆ ಮಾಡಿದರು.