ಪಕ್ಷದ ಹೈಕಮಾಂಡ್ ಇದುವರೆಗೆ ಒಬ್ಬ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡದಿರೋದು, ರಾಜ್ಯಾಧ್ಯಕ್ಷರ ಅವಧಿ ಮುಗಿದರೂ ಹೊಸಬರನ್ನು ಆ ಸ್ಥಾನಕ್ಕೆ ನೇಮಕ ಮಾಡದಿರೋದು ಒಂದು ತಪ್ಪು ಸಂದೇಶವನ್ನು ರವಾನಿಸುತ್ತಿದೆ ಎಂದು ಸದಾನಂದ ಗೌಡ ಹೇಳಿದರು. ಕುಟುಂಬ ರಾಜಕಾರಣ ಸಲ್ಲದು ಅಂತ ಅವರು ಹೇಳಿದ್ದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ದಾಳಿ ನಡೆಸಿದಂತಿತ್ತು.