ವಿಜಯಪುರದ ಗಾಂಧಿನಗರದ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಭೀಕರ ಹಲ್ಲೆ ನಡೆದಿದೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಮುಂಗಡ ಹಣ ಪಡೆದು ಕೆಲಸಕ್ಕೆ ವಿಳಂಬ ಮಾಡಿದ್ದಕ್ಕೆ ಪೈಪ್ಗಳಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಚಿಕ್ಕಲಿಕಿ ಗ್ರಾಮದ ಕಾರ್ಮಿಕರು ಹಬ್ಬಕ್ಕೆಂದು ಊರಿಗೆ ಹೋಗಿ ತಡವಾಗಿ ಬಂದಿದ್ದಕ್ಕೆ ಈ ಹಲ್ಲೆ ನಡೆದಿದೆ. ಈ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.