ಕೆಲಸ ಹೋದ ಕಾರಣ ಕಿರಣ್ ಹೆಂಡತಿ ಅವನನ್ನು ತೊರೆದು ತವರು ಮನೆಗೆ ಹೋಗಿದ್ದಳು, ಹೀಗೆ, ಹತಾಶೆಯ ಮಡುವಿನಲ್ಲಿದ್ದ ಅವನು ಪ್ರತಿಮಾ ಅವರನ್ನು ಕಚೇರಿಯಲ್ಲಿ ಕಂಡು ಮಾತಾಡಿ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾನೆ. ಆದರೆ ಅಧಿಕಾರಿ ನಿರಾಕರಿಸಿದ್ದಾರೆ. ನಂತರ ಕಿರಣ್ ನವೆಂಬರ್ 3 ರಂದು ಪ್ರತಿಮಾರನ್ನು ಅವರ ಮನೆಯಲ್ಲಿ ಭೇಟಿ ಮಾಡಲು ಪ್ರಯತ್ನಿಸಿದ್ದಾನೆ ಆದರೆ ಸಾಧ್ಯವಾಗಿಲ್ಲ.