ಡಿಸಿಪಿ ರಾಹುಲ್ ಕುಮಾರ್ ಪತ್ರಿಕಾ ಗೋಷ್ಟಿ

ಕೆಲಸ ಹೋದ ಕಾರಣ ಕಿರಣ್ ಹೆಂಡತಿ ಅವನನ್ನು ತೊರೆದು ತವರು ಮನೆಗೆ ಹೋಗಿದ್ದಳು, ಹೀಗೆ, ಹತಾಶೆಯ ಮಡುವಿನಲ್ಲಿದ್ದ ಅವನು ಪ್ರತಿಮಾ ಅವರನ್ನು ಕಚೇರಿಯಲ್ಲಿ ಕಂಡು ಮಾತಾಡಿ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾನೆ. ಆದರೆ ಅಧಿಕಾರಿ ನಿರಾಕರಿಸಿದ್ದಾರೆ. ನಂತರ ಕಿರಣ್ ನವೆಂಬರ್ 3 ರಂದು ಪ್ರತಿಮಾರನ್ನು ಅವರ ಮನೆಯಲ್ಲಿ ಭೇಟಿ ಮಾಡಲು ಪ್ರಯತ್ನಿಸಿದ್ದಾನೆ ಆದರೆ ಸಾಧ್ಯವಾಗಿಲ್ಲ.