ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಟಿವಿ ಮಾಧ್ಯಮದಲ್ಲಿ ಚರ್ಚೆಗಳು ನಡೆಯುತ್ತಿವೆ, ತಾನೂ ಅದನ್ನು ಗಮನಿಸುತ್ತಿರುವುದಾಗಿ ಹೇಳಿದ ಹರಿ ಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎಂದರು. ತಾನು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಜುಲೈ 15ರಂದು ನಡೆಯಲಿರುವ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಭೆಯ ಹಿನ್ನೆಲೆಯಲ್ಲಿ ಎಂದು ಅವರು ಹೇಳಿದರು.