ಸಿದ್ದರಾಮಯ್ಯನವರು ಶಿಷ್ಟಾಚಾರದ ಬಗ್ಗೆ ಮಾತಾಡೋದು ಹಾಸ್ಯಾಸ್ಪದ ಅನಿಸುತ್ತದೆ, ಅವರು ಮೊದಲ ಅವಧಿಗೆ ಸಿಎಂ ಆಗಿದ್ದಾಗ ಮೈಸೂರು ವರ್ತಲ ರಸ್ತೆಯ ಉದ್ಘಾಟನಾ ಕಾರ್ಯಕ್ರಮವನ್ನು ಸಂಸತ್ತಿನ ಅಧಿವೇಶನ ನಡೆಯುತ್ತಿದ್ದಾಗ ಏರ್ಪಡಿಸಿದ್ದರು, ನಾನು ತಕರಾರು ಎತ್ತಿದ್ದಾಗ ಸಂಸದ ಶ್ರೀನಿವಾಸ ಪ್ರಸಾದ್ ಸುಮ್ಮನಿರುವಂತೆ ಹೇಳಿದ್ದರು, ಆಗ ಸಿದ್ದರಾಮಯ್ಯನವರಿಗೆ ಶಿಷ್ಟಾಚಾರದ ನೆನಪಾಗಿರಲಿಲ್ಲವೇ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.