ಕಲಬುರಗಿಯಲ್ಲಿ ಶನಿವಾರ ಬಿಜೆಪಿ ನಾಯಕರ, ಕಾರ್ಯಕರ್ತರ ಸಾಗರವೇ ನೆರೆದಿತ್ತು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ರಸ್ತೆಗಳಲ್ಲಿ ಜನಸಾಗರ ಕಂಡುಬಂತು.