‘ಬಳ್ಳಾರಿ ಜೈಲಿಗೆ ದರ್ಶನ್​ ಅಡ್ಜೆಸ್ಟ್​ ಆಗಲೇಬೇಕು’: ಎಸ್​.ಪಿ. ಶೋಭಾರಾಣಿ ಖಡಕ್​ ಮಾತು

ಬೆಂಗಳೂರಿನ ವಾತಾವರಣಕ್ಕೂ ಬಳ್ಳಾರಿಯ ವಾತಾವರಣಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಆದರೆ ಬಳ್ಳಾರಿಗೆ ದರ್ಶನ್​ ಹೊಂದಿಕೊಳ್ಳಲೇಬೇಕು ಎಂದು ಬಳ್ಳಾರಿ ಎಸ್.ಪಿ. ಶೋಭಾರಾಣಿ ಹೇಳಿದ್ದಾರೆ. ಜೈಲಿಗೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಇಲ್ಲಿಗೆ ಬಂದಮೇಲೆ ಅಡ್ಜೆಸ್ಟ್​ ಆಗಲೇಬೇಕು. ನಾವು ಕೂಡ ಹೊರಗಡೆಯಿಂದ ಬಂದವರು’ ಎಂದು ಅವರು ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್​ ಮಾಡಲಾಗಿದೆ.