ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣದಲ್ಲಿ ಪ್ರಮುಖ ಅರೋಪಿಯಾಗಿ ಜೈಲು ಸೇರಿದ್ದ ನಾಗೇಂದ್ರ ಸಿದ್ದರಾಮಯ್ಯ ಸಂಪುಟದಲ್ಲಿ ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡ ಇಲಾಖೆ ಸಚಿವರಾಗಿದ್ದರು. ಹಗರಣದಲ್ಲಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿರುವುದರಿಂದ ಪುನಃ ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳುವ ಕೂಗು ವಿಶೇಷವಾಗಿ ಬಳ್ಳಾರಿಯಲ್ಲಿ ಕೇಳಿಬರುತ್ತಿದೆ.