ರಾಜ್ಯಪಾಲರ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯಪಾಲರೇ ಹೊಣೆ ಎಂದು ಹೇಳಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ವಿಜಯೇಂದ್ರ ಆಡಳಿತ ನಡೆಸುತ್ತಿರುವ ಪಕ್ಷದ ನಾಯಕರು ಇಂಥ ಹೇಳಿಕೆ ನೀಡುತ್ತಿರುವುದು ಶೋಚನೀಯ, ರಾಜ್ಯಪಾಲರು ಅದನ್ನು ಗಮನಿಸುತ್ತಾರೆ, ಸರ್ಕಾರ ಬೆಲೆ ತೆರಬೇಕಾಗುತ್ತದೆ ಎಂದರು.