ಸದನದಲ್ಲಿ ವಿಪಕ್ಷ ನಾಯಕ ಆರ್ ಅಶೋಕ

ಬಸವರಾಜ ರಾಯರೆಡ್ಡಿ ಅವರನ್ನು ಆರ್ಥಿಕ ಸಲಹೆಗಾರನಾಗಿ ನೇಮಕಗೊಳ್ಳುವ ಮೊದಲು ಅಭಿವೃದ್ಧಿ ಕಾರ್ಯಗಳು ನಡೆಯದಿರುವ ಬಗ್ಗೆ ದನಿಯೆತ್ತಿದ್ದರು. ಅಷ್ಟೆಲ್ಲ ಯಾಕೆ? ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಜಾನೆಯಲ್ಲಿ ಹಣವೇ ಇಲ್ಲ, ಒಂದರೆಡು ವರ್ಷಗಳವರೆಗೆ ಅನುದಾನ ಕೇಳಬೇಡಿ ಅಂತ ಎಲ್ಲ ಶಾಸಕರಿಗೆ ಹೇಳಿದ್ದರು ಅಂತ ಅಶೋಕ್ ಸರ್ಕಾರ ಮತ್ತು ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅನ್ನು ತರಾಟೆಗೆ ತೆಗೆದುಕೊಂಡರು.