ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಬಹಳ ಮೊದಲೇ ನಿರೀಕ್ಷಿಸಲಾಗಿತ್ತು. ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧ ಮಾಡಿದಾಗ ರಾಜ್ಯದ ಕಾಂಗ್ರೆಸ್ ನಾಯಕರು ಅದನ್ನು ತೀವ್ರವಾಗಿ ವಿರೋಧಿಸಿದ್ದರು. ಹಾಗಾಗಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಆದೇಶವನ್ನು ಹಿಂಪಡೆಯುವುದು ನಿಶ್ಚಿತವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ನಿರ್ಣಯವನ್ನು ಅಧಿಕಾರಕ್ಕೆ ಬಂದು ಆರು ತಿಂಗಳು ನಂತರ ಪ್ರಕಟಿಸಿರುವುದೇ ಆಶ್ಚರ್ಯ.