ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಕೈವಾಡ ಮತ್ತು ಕುಮ್ಮಕ್ಕಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. ಲೋಕ ಸಭಾ ಚುನಾವಣೆ ಹತ್ತಿದ ಬಂದಾಗಲೆಲ್ಲ ಅವರು ಇಂಥ ವಿಷಯಗಳನ್ನು ಮುನ್ನೆಲೆಗೆ ತಂದು ಹಿಂದೂ ವೋಟುಗಳನ್ನು ಸೆಳೆಯುವ ಪ್ರಯತ್ನ ಅವರು ಮಾಡುತ್ತಾರೆ ಎಂದು ಶೆಟ್ಟರ್ ನೇರವಾಗಿ ಆರೋಪಿಸಿದರು.