ತಪ್ಪಿಲ್ಲದೆ ಸಂವಿಧಾನ ಪೀಠಿಕೆ ಬೋಧಿಸಿದ 4 ವರ್ಷದ ಬಾಲಕ, ಎಲ್ಲೆಡೆ ಭಾರೀ ಮೆಚ್ಚುಗೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ಭದ್ರೇಶ್, ನಿನ್ನೆ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎರಡೂವರೆ ನಿಮಿಷಗಳ ಕಾಲ ಸಂವಿಧಾನ ಪೀಠಿಕೆ ಬೋಧಿಸಿದ್ದಾನೆ. ಬಾಲಕ ತಪ್ಪುಗಳಿಲ್ಲದೆ ಸಂವಿಧಾನ ಪೀಠಿಕೆ ಬೋಧನೆ ಕಂಡ ಜನ ಬೆರಗಾಗಿದ್ದಾರೆ. ಬಾಲಕನ ಟಾಲೆಂಟ್​ಗೆ ಮನಸೋತಿದ್ದಾರೆ. ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾಲಕ ಸಂವಿಧಾನ ಪೀಠಿಕೆಯನ್ನು ನೆನಪಿಟ್ಟುಕೊಂಡು, ತಪ್ಪುಗಳಿಲ್ಲದೇ ಬೋಧಿಸಿದ್ದಾನೆ. ನಾಲ್ಕು ವರ್ಷದ ಬಾಲಕ ಭದ್ರೇಶ್ ನ ಕೆಲಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.