ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಗ್ಗೆ ಮಾತಾಡಿದ ಪರಮೇಶ್ವರ್, ಅವುಗಳ ವಂಚನೆಯಿಂದ ಜನಸಾಮಾನ್ಯರು ತೊಂದರೆಗೀಡಾಗುತ್ತಿದ್ದಾರೆ ಮತ್ತು ಪ್ರಾಣಗಳನ್ನೂ ಕಳೆದುಕೊಳ್ಳುತ್ತಿದ್ದಾರೆ, ಅರ್ಥಿಕ ಇಲಾಖೆಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದಾಗಲೇ ಸಮಸ್ಯೆಗಳು ಆರಂಭವಾಗುತ್ತವೆ, ಹಲವಾರು ಹಣಕಾಸು ಸಂಸ್ಥೆಗಳು ಲೈಸೆನ್ಸ್ ಸಹ ಹೊಂದಿರುವುದಿಲ್ಲ, ಅವುಗಳನ್ನು ನಿಯಂತ್ರಿಸುವ ಕೆಲಸ ಸರ್ಕಾರ ಮಾಡಲಿದೆ ಎಂದರು.