ಪೌರಕಾರ್ಮಿಕರ ಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸಿ, ನಗರಸಭೆಗಳು ನೇರವಾಗಿ ವೇತನ ನೀಡುವಂತೆ ಮಾಡಲು ತೀರ್ಮಾನಿಸಲಾಗಿದೆ. ಕನಿಷ್ಠ ವೇತನ ಕಾಯ್ದೆಯ ಅನ್ವಯದಿಂದ 7000 ರೂ.ಗಳಿಂದ 17000 ರೂ.ಗಳಿಗೆ ವೇತನ ಹೆಚ್ಚಳಗೊಂಡಿದೆ. ಪೌರಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ಮಾಡುವ ಬೇಡಿಕೆಯನ್ನು ಸಹ ಈಡೇರಿಸಲಾಗುತ್ತಿದೆ. ಸ್ವಚ್ಛತಾ ಕಾರ್ಮಿಕರ ಸೇವೆಯನ್ನು ದೇವಕಾರ್ಯ ಎಂದು ಪರಿಗಣಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.