ಕುಮಾರಸ್ವಾಮಿಯವರು ಪಕ್ಷದ ಜವಾಬ್ದಾರಿಯನ್ನು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ವಹಿಸಿಕೊಡುವ ಯೋಚನೆ ಮಾಡುತ್ತಿದ್ದಾರೆ, ಪ್ರಾಯಶಃ ಮೇನಲ್ಲಿ ನಿಖಿಲ್ ಪಟ್ಟಾಭಿಷೇಕ ಮತ್ತು ಅಧಿಕಾರ ಹಸ್ತಾಂತರ ನಡೆಯಬಹುದು. ಅವರ ನಿರ್ಧಾರದಲ್ಲಿ ಎಲ್ಲ ಜೆಡಿಎಸ್ ನಾಯಕರು ಒಮ್ಮತ ಹೊಂದಿದ್ದಾರೋ ಇಲ್ಲವೋ ಅಂತ ಕುಮಾರಸ್ವಾಮಿಯವರೇ ಹೇಳಬೇಕು. ಯಾಕೆಂದರೆ ನಿಖಿಲ್ ರನ್ನು ಲಾಂಚ್ ಮಾಡುವ ಪ್ರಯತ್ನಗಳು ಹಿಂದೆ ವಿಫಲವಾಗಿವೆ.