ಪತ್ನಿ ಕೊಟ್ಟ ಬ್ಯಾಗ್ ಹಿಡಿದು ಸೈಲೆಂಟ್ ಆಗಿ ಸೆಲ್​ಗೆ ಹೋದ ದರ್ಶನ್; ಹೀಗಿದೆ ದಾಸನ ಸ್ಥಿತಿ

ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ದರ್ಶನ್​ಗೆ ಆತಂಕ ಹೆಚ್ಚಾಗಿದೆ. ಮುಂದೆ ಏನಾಗಲಿದೆಯೋ ಎಂಬ ಚಿಂತೆ ಅವರನ್ನು ಕಾಡುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರನ್ನು ನೋಡಲು ವಿಜಯಲಕ್ಷ್ಮಿ ತೆರಳಿದ್ದಾರೆ. ಗಂಡನಿಗೆ ಕೆಲವು ಅಗತ್ಯ ವಸ್ತುಗಳನ್ನು ಅವರು ನೀಡಿದ್ದಾರೆ. ಪತ್ನಿಯ ಭೇಟಿ ಬಳಿಕ ದರ್ಶನ್​ ಅವರು ಸೈಲೆಂಟ್​ ಆಗಿ ಬ್ಯಾಗ್ ಹಿಡಿದುಕೊಂಡು ಸೆಲ್​ಗೆ ಮರಳಿದ್ದಾರೆ.