ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಎಂಇಎಸ್ ಅಣಕು ಶವಯಾತ್ರೆ ಕೂಡ ಮಾಡಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಎಮ್ಮೆಯೊಂದು ಬೆದರಿ ಓಡಿ ಹೋಗಿರುವಂತಹ ಘಟನೆ ವಿವೇಕಾನಂದ ಸರ್ಕಲ್ ಬಳಿ ನಡೆಯಿತು.