ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ

ಹಿಜಾಬ್ ನಿಷೇಧ ಆದೇಶ ಹಿಂಪಡೆದರೆ ನಡೆಯಬಹುದಾದ ಸಂಘರ್ಷಕ್ಕೆ ಹಿಂದೂಗಳಲ್ಲ, ಮುಸಲ್ಮಾನರಲ್ಲ; ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಅದಕ್ಕೆ ಹೊಣೆಗಾರರಾಗುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು. ಸಿದ್ದರಾಮಯ್ಯ ಕೇವಲ ಒಂದು ವರ್ಗಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ ಆರೂವರೆ ಕೋಟಿ ಕನ್ನಡಿಗರಿಗೆ ಮುಖ್ಯಮಂತ್ರಿ ಅನ್ನೋದನ್ನು ಅವರು ಮರೆಯಬಾರದು ಎಂದು ಮಾಜಿ ಶಾಸಕ ಹೇಳಿದರು.