ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯಚರಣೆಯಲ್ಲಿ ಅರ್ಜುನನನ್ನು ಬಳಸುವಾಗ ಅರಣ್ಯಾಧಿಕಾರಿಗಳು ಎಚ್ಚರವಹಿಸಬೇಕಿತ್ತು ಆದರೆ, ಅವರ ಡೆವಿಲ್ ಮೇ ಕೇರ್ ಧೋರಣೆಯಿಂದಾಗಿ ಅರ್ಜುನ ಪ್ರಾಣ ಕಳೆದುಕೊಂಡಿದ್ದಾನೆ, ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎಲ್ಲ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಕೂಡಲೇ ವಜಾ ಮಾಡಬೇಕು ಮತ್ತು ವಿಧಾನ ಸಭಾ ಅಧಿವೇಶನದಲ್ಲಿ ಅವನ ಸಾವಿನ ಬಗ್ಗೆ ಚರ್ಚೆಯಾಗಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.