ಸುಮಲತಾ ಅಂಬರೀಶ್

ಮಂಡ್ಯದಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಪಕ್ಷದ ವರಿಷ್ಟರು ಹೇಳುತ್ತಿದ್ದಾರೆ ಮತ್ತು ತನಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆ. ನಿನ್ನೆ ತಮ್ಮನ್ನು ಬೇಟಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ತನಗೆ ಅದೇ ಮಾತನ್ನು ಹೇಳಿದ್ದಾರೆ. ಆದರೆ ಬೆಂಬಲಿಗರು ಮಂಡ್ಯದಿಂದ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ ಎಂದು ಸುಮಲತಾ ಹೇಳಿದರು.