ವಿಡಿಯೋನಲ್ಲಿ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ ಅಂತ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಅದೆಲ್ಲ ತನಿಖೆಯಲ್ಲಿ ಗೊತ್ತಾಗಲಿದೆ ಎಂದರು. ಪ್ರಜ್ವಲ್ ಕ್ಷಮೆ ಕೇಳಿರುವ ಬಗ್ಗೆಯೂ ಮಾತಾಡಿದ ಕುಮಾರಸ್ವಾಮಿ, ಅವನು ಕಾರ್ಯಕರ್ತರ ಕ್ಷಮೆ ಕೇಳಿರುವುದು ಅವರ ಬಗ್ಗೆ ಗೌರವಾದರ ಮತ್ತು ಮಮತೆ ಹೊಂದಿರುವುದನ್ನು ತೋರಿಸುತ್ತದೆ, ಈ ವಿಷಯ ತನಗೆ ಬಹಳ ಸಮಾಧಾನ ನೀಡಿದೆ ಎಂದರು.