ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದೆ ಮತ್ತು ಬಿಜೆಪಿ ಸಕಾಲದಲ್ಲಿ ಆರ್ ಅಶೋಕ ಅವರಿಗೆ ವಿರೋಧ ಪಕ್ಷ ನಾಯಕನ ಪಟ್ಟ ಕಟ್ಟಿ ಆಡಳಿತ ಪಕ್ಷದಿಂದ ಎದುರಾಗಬಹುದಾಗಿದ್ದ ಟೀಕೆಯಿಂದ ತಪ್ಪಿಸಿಕೊಂಡಿದೆ. ಆದರೆ, ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಬಹಿರಂಗವಾಗಿ ಟೀಕಿಸುತ್ತಿರುವುದು ಪಕ್ಷದ ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ